Monday 2 April 2012

ಕ್ರಿಕೆಟ್ ಮೈದಾನದಲ್ಲಿ ಮಾರಮಾರಿ.


ಕನ್ಯಾನ:  ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಿಸುತ್ತಿದ್ದ ಸಂದರ್ಭ ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ವ್ಯಕ್ತಿಯೊಬ್ಬನ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಘಟನೆ ಕನ್ಯಾನ ಸಮೀಪದ ಗೋಳಿಕಟ್ಟೆ ಎಂಬಲ್ಲಿ ಏರಿಲ್ ೧ರ ಶನಿವಾರ ರಾತ್ರಿ ನಡೆದಿದ್ದು, ಗಾಯಾಳುವಿನ ಸ್ಥಿತಿ ಚಿಂತಾಜನಕವಾಗಿದೆ.
 ಕೇರಳ ಮೂಲದ  ಉಂಬೈ ಎಂಬಾತನೇ ಗಂಭೀರವಾಗಿ ಹಲ್ಲೆಗೊಳಗಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.  ಕೇರಳದ ಪೈವಳಿಕೆ ನಿವಾಸಿಗಳಾದ ರಿಯಾಝ್, ಹಜೀಜ್ ಹಾಗೂ ನೂರ್ ಷಾ ಎಂಬವರೇ ಹಲ್ಲೆ ನಡೆಸಿದ ಆರೋಪಿಗಳೆಂದು ಗಾಯಾಳು ಆರೋಪಿಸಿದ್ದಾನೆ.
    ಕನ್ಯಾನದಲ್ಲಿ ಶನಿವಾರ ರಾತ್ರಿ  ಮ್ಯಾಕ್ಸಿನ್ ಗೋಳಿಕಟ್ಟೆ ಎಂಬ ಎಂಬ ಸಂಘಟನೆ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದವನ್ನು ಆಯೋಜಿಸಿತ್ತು. ಈ ಪಂದ್ಯಾಟವನ್ನು ವೀಕ್ಷಿಸಲೆಂದು ಉಂಬೈ ತನ್ನ ಸ್ನೇಹಿತ ಜತೆ ಬಂದಿದ್ದ ಎನ್ನಲಾಗಿದೆ. ಅದೇ ಸಂದರ್ಭದಲ್ಲಿ ಆರೋಪಿಗಳಾದ ಪೈವಳಿಕೆ ನಿವಾಸಿಗಳಾದ ರಿಯಾಝ್, ಹಜೀಜ್ ಹಾಗೂ ನೂರ್ ಷಾ ಎಂಬವರು ಕೂಡ ಬಂದಿದ್ದರು. ಈ ಇಬ್ಬರ ತಂಡದ ನಡುವೆ ಈ ಹಿಂದೆಯೂ ಜಗಳವಾಗಿದ್ದವು. ಈ ಬಗ್ಗೆ ಕೇರಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು ಎನ್ನಲಾಗಿದೆ. ಇವರ ನಡುವೆ ಪರಸ್ಪರ ದ್ವೇಷದ ಬೀಜ ಆಗಾಗ ಆರಂಭವಾಗುತ್ತಿತ್ತು. ಇದೇ ಕಾರಣಕ್ಕೆ ಮೂವರ ತಂಡ ಉಂಬೈನೊಂದಿಗೆ ಜಗಳ ತೆಗೆದು ಆತನಿಗೆ ಯದ್ವಾತದ್ವಾ ಹಲ್ಲೆ ನಡೆಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ತೀವ್ರವಾಗಿ ತಲೆಗೆ ಗಾಯಗೊಂಡಿದ್ದ ಉಂಬೈಯನ್ನು ಸ್ಥಳೀಯರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು,ರಿಯಾಝ್, ಹಜೀಜ್ ಹಾಗೂ ನೂರ್ ಷಾ ಎಂಬ ಮೂವರ ಮೇಲೆ ಪ್ರಕರಣ ದಾಖಲಾಗಿದೆ.
 .

0 comments:

Post a Comment

 
Design by Free WordPress Themes | Bloggerized by - Free Blogger Themes | @javtl